ಜೂಡಿ ನ್ಯೂಸ್ :
ಕೊಪ್ಪಳ ಜನವರಿ 02 : ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಜನವರಿ 3 ಮತ್ತು 4 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಜ. 3 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, ಕೊಪ್ಪಳ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು. ನಂತರ 10.30ಕ್ಕೆ ನಾರಾಯಣಪೇಟೆಯಲ್ಲಿ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಯೋಜನೆಯ ಮೊದಲನೇ ಹಂತದ ಕಾಮಗಾರಿಯ ಜಾಕ್ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ನಡೆಸುವರು. 11 ಗಂಟೆಗೆ ಶಿವಪುರ-ಹುಲಿಗಿ ಗ್ರಾಮದ ಹತ್ತಿರ ಕೊಪ್ಪಳ ಹಿರೇಹಳ್ಳ ಏತ ನೀರಾವರಿ ಯೋಜನೆ ಹಾಗೂ ಕೆರೆ ತುಂಬಿಸುವ ಕಾಮಗಾರಿಯ ಜಾಕ್ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 12 ಗಂಟೆಗೆ ಬಾಣಾಪುರದಲ್ಲಿ ಕೊಪ್ಪಳ-ಯಲಬುರ್ಗಾ ಕೆರೆ ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿಯ ಜಾಕ್ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ನಡೆಸುವರು. ಮಧ್ಯಾಹ್ನ 3.30ಕ್ಕೆ ಕಡೆಕೊಪ್ಪ ಗ್ರಾಮದಲ್ಲಿ ಕುಷ್ಟಗಿ ಏತ ನೀರಾವರಿ ಯೋಜನೆ ಹಾಗೂ ಕೆರೆ ತುಂಬಿಸುವ ಕಾಮಗಾರಿಯ 2ನೇ ಹಂತದ ಜಾಕ್ವೆಲ್ & ಪಂಪ್ ಹೌಸ್ ಪರಿವೀಕ್ಷಣೆ ಮಾಡಿದ ಬಳಿಕ ಸಂಜೆ 5 ಗಂಟೆಗೆ ಅಲ್ಲಿಂದ ನಿರ್ಗಮಿಸಿ, ಹೊಸಪೇಟೆಯ ವೈಕುಂಠ ಅತಿಥಿ ಗೃಹಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.
ಜನವರಿ 4ರಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ, ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಕೊಪ್ಪಳ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ನಂತರ 10.30ಕ್ಕೆ ಸಣ್ಣ ನೀರಾವರಿ ಇಲಾಖೆಯ ಕೊಪ್ಪಳ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಛೇರಿಗೆ ಭೇಟಿ ನೀಡುವರು. ನಂತರ ಅಂದು ಸಂಜೆ 4 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸೆ. 18 ರಂದು ಆರೋಗ್ಯ ತಪಾಸಣಾ ಶಿಬಿರ
ದಾನಿ ಸುಬ್ಬಾರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹಂಪಾಪಟ್ಟಣ ನಾಗರಿಕರು..
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ