ಜೂಡಿ ನ್ಯೂಸ್ :
ಶಾಸಕ, ಸಂಸದರು ಸೇರಿದಂತೆ ಕೈ ನಾಯಕರಿಗೆ ಮಹಾಂತೇಶಗೌಡ ಪಾಟೀಲರಿಂದ ಸನ್ಮಾನ

ಕೊಪ್ಪಳ : ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ ಪಾಟೀಲ ಅವರನ್ನು ರಾಜ್ಯಸರ್ಕಾರದ ಶಿಫಾರಸ್ಸು ಮೇರೆಗೆ ರಾಜ್ಯಪಾಲರು ನೇಮಕ ಮಾಡಿದ್ದರು.

ಈ ಹಿನ್ನೆಲೆ ನೂತನ ಆಡಳಿತ ಮಂಡಳಿಯ ಸದಸ್ಯರಾದ ಮಹಾಂತೇಶಗೌಡ ಪಾಟೀಲ ಅವರು, ಬುಧುವಾರದಂದು ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದರಾದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಬದಲ್ಲಿ ಮಹಾಂತೇಶಗೌಡ ಪಾಟೀಲ ಅವರ ಹಿತೈಷಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

More Stories
ಬೆಂಗಳೂರು ರಾಷ್ಟ್ರೀಯ ನಾಟಕ ಶಾಲೆಯ ರೆಪರ್ಟರಿಗೆ ಹಂಪಾಪಟ್ಟಣದ ಕಲಾವಿದ ಸುನಿಲ್ ಕುಮಾರ್ ಆಯ್ಕೆ
ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಗೆ ಹಂಪಾಪಟ್ಟಣದ ಜಿ ಶ್ರೀನಿವಾಸ ಆಯ್ಕೆ
ರಂಗಭೂಮಿಯನ್ನೇ ಕಲೆಯನ್ನಾಗಿಸಿಕೊಂಡ : ಪ್ರೇಮ ಗುಳೇದಗುಡ್ಡ