ಜೂಡಿ ನ್ಯೂಸ್ :
ಶಾಸಕ, ಸಂಸದರು ಸೇರಿದಂತೆ ಕೈ ನಾಯಕರಿಗೆ ಮಹಾಂತೇಶಗೌಡ ಪಾಟೀಲರಿಂದ ಸನ್ಮಾನ
ಕೊಪ್ಪಳ : ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಆಡಳಿತ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಮಹಾಂತೇಶಗೌಡ ಪಾಟೀಲ ಅವರನ್ನು ರಾಜ್ಯಸರ್ಕಾರದ ಶಿಫಾರಸ್ಸು ಮೇರೆಗೆ ರಾಜ್ಯಪಾಲರು ನೇಮಕ ಮಾಡಿದ್ದರು.
ಈ ಹಿನ್ನೆಲೆ ನೂತನ ಆಡಳಿತ ಮಂಡಳಿಯ ಸದಸ್ಯರಾದ ಮಹಾಂತೇಶಗೌಡ ಪಾಟೀಲ ಅವರು, ಬುಧುವಾರದಂದು ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದರಾದ ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಕರಡಿ ಸಂಗಣ್ಣನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಬದಲ್ಲಿ ಮಹಾಂತೇಶಗೌಡ ಪಾಟೀಲ ಅವರ ಹಿತೈಷಿಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.
More Stories
ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸೆ. 18 ರಂದು ಆರೋಗ್ಯ ತಪಾಸಣಾ ಶಿಬಿರ
ದಾನಿ ಸುಬ್ಬಾರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಹಂಪಾಪಟ್ಟಣ ನಾಗರಿಕರು..
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ